ಕನಿಷ್ಠ ವೇತನದ ಅಂತಿಮ ಅಧಿಸೂಚನೆ
*ಕನಿಷ್ಠ ವೇತನದ ಅಂತಿಮ ಅಧಿಸೂಚನೆ ಮರುಪರಿಶೀಲನೆ ಬೇಡ: ಜೆಸಿಟಿಯು ನಿಂದ ಸಿಎಂಗೆ ಮನವಿ* *ಬೆಂಗಳೂರು, ಜು.04:* "ರಾಜ್ಯದಲ್ಲಿ ಕನಿಷ್ಠ ವೇತನದ ಅಂತಿಮ ಅಧಿಸೂಚನೆಯನ್ನು ಮರುಪರಿಶೀಲಿಸಬಾರದು" ಎಂದು ಟ್ರೇಡ್ ಯೂನಿಯನ್ ಗಳ ಜಂಟಿ ಸಮಿತಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಶನಿವಾರ ಮನವಿ ಪತ್ರ ಸಲ್ಲಿಸಿದರು. ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್ ವರಲಕ್ಷ್ಮಿ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿ ಅವರರನ್ನು ಗೃಹಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಈ ವಿಚಾರವಾಗಿ ಚರ್ಚೆ ನಡೆಸಿತು. ಇತ್ತೀಚೆಗೆ ನಡೆದ ಸಚಿವ ಸಂಪುಟದಲ್ಲಿ ಕನಿಷ್ಠ ವೇತನ ಪರಿಷ್ಕೃರಣೆಯನ್ನು ನಡೆಸಲು ಮುಂದಾಗಿರುವುದು ಆಘಾತ ಉಂಟು ಮಾಡಿದೆ. ಕನಿಷ್ಠ ವೇತನದ ಅಂತಿಮ ಅಧಿಸೂಚನೆಯನ್ನು ಮರುಪರಿಶೀಲಿಸುವ ಅಥವಾ ಹಿಂಪಡೆಯುವ ಯಾವುದೇ ಕ್ರಮವನ್ನು ನಿಲ್ಲಿಸಿ ಕಾರ್ಮಿಕರ ಪರವಾಗಿ ಸರ್ಕಾರ ನಿಲ್ಲಬೇಕು” ಎಂದು ಮುಖ್ಯಮಂತ್ರಿಗಳಿಗೆ ನೀಡಿರುವ ಮನವಿ ಪತ್ರದಲ್ಲಿ ಕೋರಲಾಗಿದೆ. *ದಶಕದ ಬಳಿಕ ಪರಿಷ್ಕರಣೆ:* “ರಾಜ್ಯದಲ್ಲಿ 2017-18 ರಿಂದಲೇ ಕನಿಷ್ಠ ವೇತನ ಪರಿಷ್ಕರಣೆಯು ಬಾಕಿ ಉಳಿದಿತ್ತು. ದೀರ್ಘಕಾಲದ ಬಳಿಕ 39 ನಿಗದಿಪಡಿತ ಉದ್ಯೋಗಗಳ ವೇತನವನ್ನು ಸುಮಾರು 8 ವರ್ಷಗಳ ನಂತರ ಪರಿಷ್ಕರಿಸಲಾಗಿದೆ. ಈ ವಿಳಂಬವು ಕನಿಷ್ಠ ವೇತನ ಕಾಯ್ದೆ ಮತ್ತು ಸುಪ್ರೀಂ ಕೋರ್ಟ್ ನಿರ್ದೇಶನಗಳ ಉಲ್ಲಂಘನೆಯಾಗಿದೆ. ಅಲ್ಲದೆ, ಮಾಲೀಕರು ವಾದಿಸುತ್ತಿರುವಂತೆ ವೇತನದ ಹೆಚ್ಚಳವು ಶೇ. 60 ರಷ್ಟಿಲ್ಲ, ...