*ಲೋಕಸೇವಾ ಆಯೋಗಕ್ಕೆ ಅರ್ಜಿ ಸಲ್ಲಿಸಲು ಅಡೆತಡೆಯಾಗಿದ್ದಂತಹ ತಾಂತ್ರಿಕ ಸಮಸ್ಯೆ ತ್ವರಿತಗತಿಯಲ್ಲಿ ಇತ್ಯರ್ಥ*-ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ*

*ಲೋಕಸೇವಾ ಆಯೋಗಕ್ಕೆ ಅರ್ಜಿ ಸಲ್ಲಿಸಲು ಅಡೆತಡೆಯಾಗಿದ್ದಂತಹ ತಾಂತ್ರಿಕ ಸಮಸ್ಯೆ ತ್ವರಿತಗತಿಯಲ್ಲಿ ಇತ್ಯರ್ಥ*-ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ*

ಕರ್ನಾಟಕ, ಜನವರಿ 29:ಯುಪಿಎಸಿ ಪ್ರಸಕ್ತ ಸಾಲಿನ ನಾಗರಿಕ ಸೇವಾ ಪರೀಕ್ಷೆ ಅಧಿಸೂಚನೆಯಲ್ಲಿ ಒಬಿಸಿ ವರ್ಗದಡಿ‌ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಸಂದರ್ಭ ಅಡೆತಡೆ ಉಂಟಾದ ಹಿನ್ನೆಲೆ ಹಲವು ಅಭ್ಯರ್ಥಿಗಳು ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗಕ್ಕೆ ಇ-ಮೇಲ್‌ ಕಳುಹಿಸಿ, ಸಮಸ್ಯೆ ಬಗೆಹರಿಸುವಂತೆ ಕೋರಿದ್ದರು. 

ಈ ಕುರಿತು ಕೂಡಲೇ ಸ್ಪಂದಿಸಿದ ವಿಶೇಷ ಕರ್ತವ್ಯಾಧಿಕಾರಿಗಳು ಕಂದಾಯ ಇಲಾಖೆ ಹಾಗೂ ಅಟಲ್‌ ಜೀ ಜನಸ್ನೇಹಿ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಿ, ಒಬಿಸಿ ಅಭ್ಯರ್ಥಿಗಳು ಎದುರಿಸುತ್ತಿರುವ ಸಮಸ್ಯೆಯ ಬಗ್ಗೆ ಗಮನಕ್ಕೆ ತರಲಾಗಿತ್ತು. 

ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಕೇಂದ್ರ ಲೋಕಸೇವಾ ಆಯೋಗಕ್ಕೆ ಅರ್ಜಿ ಸಲ್ಲಿಸಲು ಅಡೆತಡೆಯಾಗಿದ್ದಂತಹ ತಾಂತ್ರಿಕ ಸಮಸ್ಯೆಯನ್ನು ತ್ವರಿತಗತಿಯಲ್ಲಿ ಇತ್ಯರ್ಥ ಪಡಿಸಿ ಪರೀಕ್ಷಾ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. 

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕೇಂದ್ರ ಒಬಿಸಿ ಪ್ರಮಾಣ ಪತ್ರ ಪಡೆಯಲು ಎರಡನೇ ಬಾರಿ ಅರ್ಜಿ ಸಲ್ಲಿಸಲು ಎಜೆಎಸ್‌ಕೆ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ. ಅಭ್ಯರ್ಥಿಗಳು ಇಂದಿನಿಂದಲೇ ಅಟಲ್‌ ಜೀ ಜನಸ್ನೇಹಿ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. 

ಕಂದಾಯ ಇಲಾಖೆಯ ಆಯುಕ್ತರಾದ ಶ್ರೀ ಪೊಮ್ಮಲ್‌ ಸುನೀಲ್‌ ಕುಮಾರ್ ಹಾಗೂ ಅಟಲ್‌ ಜೀ ಜನಸ್ನೇಹಿ ಕೇಂದ್ರದ ನಿರ್ದೇಶಕರಾದ ಶ್ರೀ ಭೋಯಲ್‌ ಹರ್ಷಲ್‌ ನಾರಾಯಣ್‌ ರಾವ್‌ ಅವರ ತುರ್ತು ಸ್ಪಂದನೆಗೆ ಮುಖ್ಯಮಂತ್ರಿಗಳ ಸಚಿವಾಲಯವು ಪ್ರಶಂಸೆ ವ್ಯಕ್ತಪಡಿಸಿದೆ.
#go #ಸಭೆ #ಕಾರ್ಯಕ್ರಮ #ಅಧ್ಯಕ್ಷ #ಸಮಿತಿ #ಪಂಚಾಯತ್ #ಪತ್ರಿಕೆ #ಮಾಧ್ಯಮ #Chethana #Muniswamygowda #Riya #YOGI #ವಿದ್ಯಾರ್ಥಿ #ನೌಕರ #ಆದೇಶ #ಚಿತ್ರ #ದೃಶ್ಯ #ದೇವರು
#ನೀರು #ರಾತ್ರಿ #ಹೂ #ಕನ್ನಡ #ಭಾಷೆ #ಚೇತನಾ #ಮುನಿಸ್ವಾಮಿಗೌಡ
https://www.instagram.com/informationforpeople?igsh=MTk1dGlwODV0Y29yNg==

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

*ಪ್ರತಿಷ್ಠಿತ ಆದಿಚುಂಚನಗಿರಿ ವಸತಿ ಶಾಲೆಯಲ್ಲಿ ಬಡ ಮಕ್ಕಳಿಗೆ ಉಚಿತ ವಸತಿಯುತ ಶಿಕ್ಷಣ - ಡಾ॥ ನಿರ್ಮಲಾನಂದನಾಥ ಮಹಾಸ್ವಾಮೀಜಿ*

*ಆಂಥೂರಿಯಂ ಸಸ್ಯಗಳನ್ನು ಆರೋಗ್ಯಕರವಾಗಿ ನೋಡಿಕೊಳ್ಳಲು ಕೆಲವು ಸಲಹೆಗಳು ಇಲ್ಲಿವೆ: -*

ಕಮಲಕಮಲದ ಗಿಡವನ್ನು ಬೆಳೆಸಲು ಸರಳ ಮಾರ್ಗಗಳು ಹೀಗಿವೆ