*ಮಾರ್ಚ.2 ರಿಂದ 4 ರವರೆಗೆ ರಾಜ್ಯ ಮಟ್ಟದ**ಪಾರಂಪರಿಕ ವೈದ್ಯ ಸಮ್ಮೇಳನ ಕಾರ್ಯಕ್ರಮ**ಶ್ರೀ ಆದಿಚುಂಚನಗಿರಿ ಪೀಠಾಧ್ಯಕ್ಷರ ದಿವ್ಯ ಸಾನಿಧ್ಯ*
*ಮಾರ್ಚ.2 ರಿಂದ 4 ರವರೆಗೆ ರಾಜ್ಯ ಮಟ್ಟದ*
*ಪಾರಂಪರಿಕ ವೈದ್ಯ ಸಮ್ಮೇಳನ ಕಾರ್ಯಕ್ರಮ*
*ಶ್ರೀ ಆದಿಚುಂಚನಗಿರಿ ಪೀಠಾಧ್ಯಕ್ಷರ ದಿವ್ಯ ಸಾನಿಧ್ಯ*
===================
ಕರ್ನಾಟಕ, ಫೆಬ್ರುವರಿ.27: ಜ ಕರ್ನಾಟಕ ಜೀವ ವೈವಿಧ್ಯ ಮಂಡಳಿ, ಬೆಂಗಳೂರು ಪಾರಂಪರಿಕ ವೈದ್ಯ ಪರಿಷತ್ ಕರ್ನಾಟಕ (ರಿ) ಬೆಂಗಳೂರು ಹಾಗೂ ಕಲ್ಯಾಣ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ (ರಿ) ಲಿಂಗಸುಗೂರು ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ್.2 ರಿಂದ 4 ರವರೆಗೆ 15ನೇ ರಾಜ್ಯ ಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಮಾರ್ಚ್.2 ರಂದು ಬೆಳಿಗ್ಗೆ 11 ಗಂಟೆಗೆ ಬೆಲ್ದಾಳೆ ಕನ್ವೆನ್ಯನ್ ಹಾಲ್ (ಲಾಹೋಟಿ ಶೋ-ರೂಮ್ ಹಿಂದುಗಡೆ) ಬೀದರದಲ್ಲಿ 15ನೇ ರಾಜ್ಯ ಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನ ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಾಡಲಿದ್ದಾರೆ.
ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಮಠ ಶ್ರೀ ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷರಾದ ಷ.ಪೂ.ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ವಹಿಸಲಿದ್ದಾರೆ. ಸ್ಮರಣ ಸಂಚಿಕೆ ಮುಖಪುಟ ಬಿಡುಗಡೆಯನ್ನು ಬೀದರ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಔರಾದ (ಬಿ) ಶಾಸಕ ಪ್ರಭು ಬಿ.ಚವ್ಹಾಣ, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪಾ ಎನ್.ಪಾಟೀಲ ಹಾಗೂ ವಿಧಾನ ಪರಿಷತ್ ಸದಸ್ಯರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಎಂ.ಜಿ.ಮೂಳೆ ಹಾಗೂ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣರಾವ, ಬೀದರ ನಗರಸಭೆ ಅಧ್ಯಕ್ಷರಾದ ಮಹ್ಮದ ಗೌಸ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಬೆಂಗಳೂರು ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಸದಸ್ಯ ಕಾರ್ಯದರ್ಶಿಗಳಾಧ ಜಗತ್ರಾಮ, ಬೆಂಗಳೂರು ವನ್ಯಜೀವಿ ಮಂಡಳಿಯ ಸದಸ್ಯರಾದ ವಿನಯ ಮಾಳಗೆ, ಬೀದರ ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿಯ ಜಿಲ್ಲಾಧ್ಯಕ್ಷರಾದ ಅಮೃತರಾವ ಚಿಮಕೋಡೆ ಭಾಗವಹಿಸಲಿದ್ದಾರೆ.
ಅದೇ ದಿನ (ಮಾರ್ಚ.2) ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರ ರಂಗಮಂದಿರ ಬೀದರದಲ್ಲಿ ಮಧ್ಯಾಹ್ನ 2 ರಿಂದ 3.30 ರವರೆಗೆ ಪಾರಂಪರಿಕ ವೈದ್ಯ ಪದ್ಧತಿಯ ಮಹತ್ವ ಮತ್ತು ದಾಖಲಾತಿ (ಗೋಷ್ಠಿ-1), ಮಧ್ಯಾಹ್ನ 3.30 ರಿಂದ 5 ರವರೆಗೆ ಸಂಧಿವಾತ ಚಿಕಿತ್ಸೆಯಲ್ಲಿ ಪಾರಂಪರಿಕ ವೈದ್ಯ ಪದ್ಧತಿ (ಗೋಷ್ಠಿ-2) ಹಾಗೂ ಸಾಯಂಕಾಲ 5 ರಿಂದ 6 ರವರೆಗೆ ಪಾರಂಪರಿಕ ವೈದ್ಯ ಪದ್ಧತಿ, ಪರಿಸರ ಹಾಗೂ ಔಷಧಿ ಸಸ್ಯಗಳ ಸಂರಕ್ಷಣೆ (ಕವಿಗೋಷ್ಠಿ) ನಡೆಯಲಿದೆ. ಹಾಗೂ ಸಾಯಂಕಾಲ 6 ರಿಂದ 8 ರವರೆಗೆ ಸಾಂಸ್ಕøತಿಕ ತಂಡದವರಿಂದ ವೈವಿದ್ಯಮಯ ಕಾರ್ಯಕ್ರಮಗಳು ಜರುಗಲಿವೆ.
ಮಾರ್ಚ್. 3 ರಂದು ಬೆಳಿಗ್ಗೆ 10 ರಿಂದ 11.30 ರವರೆಗೆ ಔಷಧಿ ಸಸ್ಯಗಳನ್ನು ಬೆಳೆಸುವುದು ಮತ್ತು ಮಾರಾಟ ಮಾಡುವುದು ಉಪ ವಿಷಯ:ಔಷಧಿ ಸಸ್ಯಗಳ ಸಂರಕ್ಷಣೆ (ಗೋಷ್ಠಿ-3), ಬೆಳಿಗ್ಗೆ 11.30 ರಿಂದ 1 ರವರೆಗೆ ಕ್ಯಾನ್ಸರ್ ರೋಗ ಚಿಕಿತ್ಸೆ (ಗೋಷ್ಠಿ-4), ಮಧ್ಯಾಹ್ನ 2 ರಿಂದ 3.30 ರವರೆಗೆ ಸ್ತ್ರೀ ರೋಗ ಚಿಕಿತ್ಸೆಯಲ್ಲಿ ಔಷಧಿ ಸಸ್ಯಗಳ ಬಳಕೆ (ಗೋಷ್ಠಿ-5), ಮಧ್ಯಾಹ್ನ 3.30 ರಿಂದ 5 ರವರೆಗೆ ಕೈತೋಟ ಸಂಸ್ಕೃತಿ, ನಮ್ಮ ಕೈತೋಟ ನಮ್ಮ ಸ್ವಾಸ್ಥ್ಯ (ಮನೆ ಮದ್ದು) ಔಷಧಿ ಸಸ್ಯಗಳನ್ನು ಬೆಳೆಸುವುದು ಮತ್ತು ಬಳಸುವುದು (ಮಹಿಳೆಯರಿಗಾಗಿ ಗೋಷ್ಠಿ-6), ಮಧ್ಯಾಹ್ನ 5 ರಿಂದ 6.30 ರವರೆಗೆ ಮಧುಮೇಹ ಚಿಕಿತ್ಸೆಯಲ್ಲಿ ಪಾರಂಪರಿಕ ವೈದ್ಯ ಪದ್ಧತಿ (ಗೋಷ್ಠಿ-7), ಸಾಯಂಕಾಲ 6.30 ರಿಂದ 8 ರವರೆಗೆ ಸಾಂಸ್ಕೃತಿಕ ತಂಡದವರಿಂದ ವೈವಿದ್ಯಮಯ ಕಾರ್ಯಕ್ರಮಗಳು ಜರುಗಲಿವೆ.
ಮಾರ್ಚ.4 ರಂದು ಬೆಳಿಗ್ಗೆ 10 ರಿಂದ 11.30 ರವರೆಗೆ ಪಶುರೋಗ ಚಿಕಿತ್ಸೆಯಲ್ಲಿ ಪಾರಂಪರಿಕ ವೈದ್ಯ ಪದ್ಧತಿ (ಗೋಷ್ಠಿ-8), ಬೆಳಿಗ್ಗೆ 11.30 ರಿಂದ 1 ರವರೆಗೆ ಪಾಶ್ರ್ವವಾಯು ಚಿಕಿತ್ಸೆಯಲ್ಲಿ ಪಾರಂಪರಿಕ ವೈದ್ಯ ಪದ್ಧತಿ (ಗೋಷ್ಠಿ-9), ಮಧ್ಯಾಹ್ನ 2 ರಿಂದ 3 ರವರೆಗೆ ಚರ್ಮ ರೋಗ ಚಿಕಿತ್ಸೆಯಲ್ಲಿ ಪಾರಂಪರಿಕ ವೈದ್ಯ ಪದ್ಧತಿ (ಗೋಷ್ಠಿ-10), ಮಧ್ಯಾಹ್ನ 3 ರಿಂದ 4 ರವರೆಗೆ ಮೂಲವ್ಯಾಧಿ ಚಿಕಿತ್ಸೆಯಲ್ಲಿ ಪಾರಂಪರಿಕ ವೈದ್ಯ ಪದ್ಧತಿ (ಗೋಷ್ಠಿ-11) ನಡೆಯಲಿವೆ.
ಮಾರ್ಚ.4 ರಂದು ಸಾಯಂಕಾಲ 5 ಗಂಟೆಗೆ ಸಮಾರೋಪ, ಪ್ರಶಸ್ತಿ ಪ್ರಧಾನ ಹಾಗೂ ಸನ್ಮಾನ ಸಮಾರಂಭ ಜರುಗಲಿದೆ. ಈ ಸಮಾರಂಭದ ದಿವ್ಯ ಸಾನಿಧ್ಯ ಶ್ರೀ ಆದಿಚುಂಚನಗಿರಿ ಕ್ಷೇತ್ರದ ಕಾರ್ಯದರ್ಶಿಗಳು ಹಾಗೂ ಬೆಂಗಳೂರು ಪಾರಂಪರಿಕ ವೈದ್ಯ ಪರಿಷತ್ ಕರ್ನಾಟಕ (ರಿ) ಗೌರವಾಧ್ಯಕ್ಷರಾದ ಪೂಜ್ಯ ಸದ್ಗುರು ಶ್ರೀ ಶ್ರೀ ಪ್ರಸನ್ನನಾಥ ಸ್ವಾಮಿಜಿ, ಶ್ರೀ ಶಿವಶಕ್ತಿ ಪೀಠ ಸುಕ್ಷೇತ್ರ ಇರಕಲ್ಲ ತಾ.ಮಸ್ಕಿ ಜಗದ್ಗುರು ಹಾಗೂ ಲಿಂಗಸುಗೂರು ಕಲ್ಯಾಣ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ತಿನ ಗೌರವಾಧ್ಯಕ್ಷ ಪೂಜ್ಯ ಶ್ರೀ ಬಸವಪ್ರಸಾದ ಮಹಾಸ್ವಾಮಿಗಳು ಹಾಗೂ ಜಗದ್ಗುರು ನಿರಂಜನ ಸಂಸ್ಥಾನ ಮಂಠ, ಭಾತಂಬ್ರಾ ಬೀದರ ಉತ್ತರಾಧಿಕಾರಿಗಳಾದ ಪೂಜ್ಯ ಡಾ.ಗುರುಬಸವ ದೇವರು ಹಿರೇಮಠ ಅವರುಗಳು ವಹಿಸಲಿದ್ದಾರೆ.
ಸಮಾರೋಪ ನುಡಿ ಕರ್ನಾಟಕ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯ ಬೀದರ ಕುಲಪತಿಗಳಾದ ಪೆÇ್ರ.ಕೆ.ಸಿ.ವೀರಣ್ಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ವ್ಯವಸ್ಥಾಪಕ ನಿರ್ದೇಶಕರು ಎಂಎಸ್ಐಎಲ್ ಬೆಂಗಳೂರು ಮನೋಜಕುಮಾರ ವಹಿಸಲಿದ್ದಾರೆ. ಗೌರವ ಉಪಸ್ಥಿತಿ ಬೀದರ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಎಂ.ಎಂ.ವಾನತಿ, ಬೀದರ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಬೀದರ ಗುರುನಾನಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಬಲಬೀರಸಿಂಗ್, ಬೀದರ ಶಾಹೀನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಅಬ್ದುಲ್ ಖದೀರ್, ಬೀದರ ಕಿತ್ತೂರ ರಾಣಿ ಚನ್ನಮ್ಮ ಮಹಿಳಾ ಮಂಡಳ ಅಧ್ಯಕ್ಷರಾದ ಗುರಮ್ಮ ಸಿದ್ದಾರೆಡ್ಡಿ, ಕರ್ನಾಟಕ ಜೀವ ವೈವಿದ್ಯ ಮಂಡಳಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗೋವರ್ಧನಸಿಂಗ್, ಬೀದರ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಸೋಮಶೇಖರ ಬಿರಾದಾರ ವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ಪಾರಂಪರಿಕ ವೈದ್ಯ ಪರಿಷತ್ತು ಕರ್ನಾಟಕ (ರಿ) ಅಧ್ಯಕ್ಷರಾದ ಜಿ.ಮಹಾದೇವಯ್ಯ ವಹಿಸಲಿದ್ದಾರೆ.
******
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಅಭಿಪ್ರಾಯಗಳಿಗೆ ಧನ್ಯವಾದಗಳು , ಸಧ್ಯದಲ್ಲೇ ಪ್ರತಿಕ್ರಿಯೆ ನೀಡಲಾಗುತ್ತದೆ.🙏