*ಆದಿಚುಂಚನಗಿರಿ ಮಹಾಸಂಸ್ಥಾನದ *ಜ್ಞಾನ ವಿಜ್ಞಾನ ತಂತ್ರಜ್ಞಾನ ಮೇಳ ಉದ್ಘಾಟನೆ ಕಾರ್ಯಕ್ರಮ* ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಭಾಗಿ*

*ಆದಿಚುಂಚನಗಿರಿ ಮಹಾಸಂಸ್ಥಾನದ  *ಜ್ಞಾನ ವಿಜ್ಞಾನ ತಂತ್ರಜ್ಞಾನ ಮೇಳ ಉದ್ಘಾಟನೆ ಕಾರ್ಯಕ್ರಮ* ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಭಾಗಿ*


ಕರ್ನಾಟಕ ಫೆಬ್ರವರಿ 19://ಜೈ ಶ್ರೀ ಗುರುದೇವ್//
ದಿನಾಂಕ 19.02.2025 ಬುಧವಾರ ಬೆಳಿಗ್ಗೆ 10.30 ಗಂಟೆಗೆ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಬಿಜಿಎಸ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ *ಜ್ಞಾನ ವಿಜ್ಞಾನ ತಂತ್ರಜ್ಞಾನ ಮೇಳ ಉದ್ಘಾಟನೆ ಕಾರ್ಯಕ್ರಮ* ದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ *ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು* ದಿವ್ಯಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. 

ಈ  ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ *ಪರಮಪೂಜ್ಯ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರು,* ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಎಲ್ಲಾ ಶಾಖೆ ಮಠದ ಪೂಜ್ಯ ಸ್ವಾಮೀಜಿಗಳವರು, ಕೃಷಿ ಸಚಿವರಾದ *ಎನ್.ಚಲುವರಾಯಸ್ವಾಮಿಯವರು,* ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಖ್ಯಾತ ವಿಜ್ಞಾನಿಗಳಾದ *ಡಾ.ಗೌತಮ್ ರಾಧಾಕೃಷ್ಣ ದೇಸಿರಾಜು ಅವರು,*  ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ *ಶ್ರೀಮತಿ ಡಾ.ಶಾಲಿನಿ ರಜನೀಶ್ ಅವರು,*  ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ *ರವಿಗಣಿಗ ಅವರು,* ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ.ಕುಮಾರ್ ಅವರು, ಮಂಡ್ಯ  ಜಿಲ್ಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ನಂದಿನಿ ಅವರು,  ಆದಿಚುಂಚನಗಿರಿ ವಿಶ್ವವಿದ್ಯಾಲಯ ಉಪಕುಲಪತಿಗಳಾದ *ಡಾ.ಶೇಖರ್ ಅವರು,* ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು, ಶ್ರೀ ಮಠದ ಸದ್ಭಕ್ತರು ಉಪಸ್ಥಿತರಿದ್ದರು.

#school #college #puc #ಶಿಕ್ಷಣ #coach #Chethana #gowda #Riya #YOGI #ವಿದ್ಯಾರ್ಥಿ #ನೌಕರ #ಆದೇಶ #ಚಿತ್ರ #ದೃಶ್ಯ #ದೇವರು #ನೀರು #ಚುಂಚನಗಿರಿ #ಸಿದ್ದಗಂಗಾ #ಉದ್ಘಾಟನೆ 
https://www.instagram.com/informationforpeople


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

*ಪ್ರತಿಷ್ಠಿತ ಆದಿಚುಂಚನಗಿರಿ ವಸತಿ ಶಾಲೆಯಲ್ಲಿ ಬಡ ಮಕ್ಕಳಿಗೆ ಉಚಿತ ವಸತಿಯುತ ಶಿಕ್ಷಣ - ಡಾ॥ ನಿರ್ಮಲಾನಂದನಾಥ ಮಹಾಸ್ವಾಮೀಜಿ*

*ಆಂಥೂರಿಯಂ ಸಸ್ಯಗಳನ್ನು ಆರೋಗ್ಯಕರವಾಗಿ ನೋಡಿಕೊಳ್ಳಲು ಕೆಲವು ಸಲಹೆಗಳು ಇಲ್ಲಿವೆ: -*

ಕಮಲಕಮಲದ ಗಿಡವನ್ನು ಬೆಳೆಸಲು ಸರಳ ಮಾರ್ಗಗಳು ಹೀಗಿವೆ