ಪೋಸ್ಟ್‌ಗಳು

ಹಕ್ಕಿಜ್ವರದ ಹೆಚ್ಚಿನ ಆತಂಕ ಬೇಡ: ಜಿಲ್ಲಾಧಿಕಾರಿ* ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಹಕ್ಕಿಜ್ವರದ ಹೆಚ್ಚಿನ ಆತಂಕ ಬೇಡ: ಜಿಲ್ಲಾಧಿಕಾರಿ*

ಇಮೇಜ್
*ಹಕ್ಕಿಜ್ವರದ ಹೆಚ್ಚಿನ ಆತಂಕ ಬೇಡ: ಜಿಲ್ಲಾಧಿಕಾರಿ* *ಕರ್ನಾಟಕ ಫೆ 28*:  ಚಿಕ್ಕಬಳ್ಳಾಪುರ  ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವ ಹಕ್ಕಿ ಜ್ವರವನ್ನು ಹತೋಟಿಗೆ ತರಲು ತಾಲೂಕಿನ ವರದಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ನಿಯಂತ್ರಣ ಕ್ರಮಗಳನ್ನು ಸಮರೋಪಾಧಿಯಲ್ಲಿ ತೆಗೆದುಕೊಳ್ಳಲಾಗುತ್ತಿದೆ. ಜನರು ಹೆಚ್ಚಿನ ಆತಂಕಕ್ಕೆ ಒಳಗಾಗದೆ ಆರೋಗ್ಯ ಇಲಾಖೆಯ ಮಾರ್ಗಸೂಚಿ ಕ್ರಮಗಳನ್ನು(SOP) ಪಾಲಿಸುವಂತೆ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಮನವಿ ಮಾಡಿದರು. ಹಕ್ಕಿ ಜ್ವರ ನಿಯಂತ್ರಣದ ಕುರಿತು ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಾಲೂಕಿನ ವರದಹಳ್ಳಿ ಗ್ರಾಮದಲ್ಲಿ ಕಾಣಿಸಿಕೊಂಡಿರುವ ಹಕ್ಕಿಜ್ವರ ಸೋಂಕು ನಿಯಂತ್ರಿಸುವ ಮೂಲಕ ರೋಗ ಬೇರೆಡೆಗೆ ಹರಡದಂತೆ ಹಲವು ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ.ಈಗಾಗಲೇ ವರದಹಳ್ಳಿಯಲ್ಲಿ ಸಾವನ್ನಪಿದ ಕೋಳಿಗಳಲ್ಲಿ ಹಕ್ಕಿಜ್ವರದ ಸೋಂಕು ಪತ್ತೆಯಾಗಿ ದೃಢಪಟ್ಟಿರುವ ಕಾರಣ ಈ ಗ್ರಾಮವನ್ನು ಕೇಂದ್ರವಾಗಿಸಿಕೊಂಡು ಸುತ್ತಲೂ 10 ಕಿ.ಮೀ ವ್ಯಾಪ್ತಿಯಲ್ಲಿ ಕೋಳಿ ಸಾಗಾಣಿಕೆ ಮೇಲೆ ನಿರ್ಬಂಧ ಹೇರಲಾಗಿದೆ. ಅಲ್ಲದೇ ಹೊರಗಡೆಯಿಂದ ವರದಹಳ್ಳಿ ಸುತ್ತಮುತ್ತಲ ಗ್ರಾಮಗಳಿಗೆ ಕೋಳಿಗಳನ್ನು ತರದಂತೆ ನಾಕಾಬಂಧಿ ಹಾಕಲಾಗಿದೆ. ವರದಹಳ್ಳಿಯಲ್ಲಿನ ಕೋಳಿಗಳ ಮೇಲೆ ಹೆಚ್ಚಿನ ನಿಗಾ ಇಡಲಾಗಿದ್ದು, ರೋಗ ನಿಯಂತ್ರಣದ ಮುಂಜಾಗ್ರತಾ ಕ್ರಮದ ಭಾಗವಾಗಿ ...