ಪೋಸ್ಟ್‌ಗಳು

*ಪ್ರಾದೇಶಿಕ ಅಸಮತೋಲನ ನಿವಾರಣೆ ಆಗಲು ಅಲ್ಲಿನ ಜನರ ತಲಾ ಆದಾಯ ಹೆಚ್ಚಳವಾಗಬೇಕು ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

*ಪ್ರಾದೇಶಿಕ ಅಸಮತೋಲನ ನಿವಾರಣೆ ಆಗಲು ಅಲ್ಲಿನ ಜನರ ತಲಾ ಆದಾಯ ಹೆಚ್ಚಳವಾಗಬೇಕು- ಆರ್ಥಿಕ ತಜ್ಞರಾದ ಪ್ರೊ ಎಂ ಗೋವಿಂದರಾವ್

ಇಮೇಜ್
*ಪ್ರಾದೇಶಿಕ ಅಸಮತೋಲನ ನಿವಾರಣೆ ಆಗಲು ಅಲ್ಲಿನ ಜನರ ತಲಾ ಆದಾಯ ಹೆಚ್ಚಳವಾಗಬೇಕು- ಆರ್ಥಿಕ ತಜ್ಞರಾದ ಪ್ರೊ ಎಂ ಗೋವಿಂದರಾವ್* *ಕರ್ನಾಟಕ , ಮಾರ್ಚ್ 25 :ಪ್ರಾದೇಶಿಕ ಅಸಮತೋಲನ ಹೋಗಲಾಡಿಸಲು ಹಿಂದುಳಿದ ತಾಲ್ಲೂಕುಗಳ ಜನರ ತಲಾ ಆದಾಯ ಹೆಚ್ಚ್ಕವಾಗಬೇಕು. ಈ ನಿಟ್ಟಿನಲ್ಲಿ ಸೌಲಭ್ಯಗಳನ್ನು ಕಲ್ಪಿಸಿ ಯೋಜನೆಗಳನ್ನು ರೂಪಿಸಬೇಕು ಎಂದು  ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ  ಸಮಿತಿಯ ಅಧ್ಯಕ್ಷರು ಹಾಗೂ ಆರ್ಥಿಕ ತಜ್ಞರಾದ ಪ್ರೊ ಎಂ ಗೋವಿಂದರಾವ್ ಅವರು ತಿಳಿಸಿದರು.  ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮೈಸೂರು ವಿಭಾಗ ಮಟ್ಟದ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಾದೇಶಿಕ ಅಸಮತೋಲನ ಸಮಿತಿ 2024 ರ ಸೆಪ್ಟೆಂಬರ್ ನಿಂದ ಕೆಲಸ ಮಾಡಲು ಪ್ರಾರಂಭಿಸಿದೆ. ನಂಜುಂಡಪ್ಪ ವರದಿಯಲ್ಲಿ 35 ಸೂಚ್ಯಂಕ ಗಳನ್ನು ಅಧ್ಯಯನ ಮಾಡಿ ವರದಿ ನೀಡಿತ್ತು. ವರದಿಯಂತೆ 31 ಸಾವಿರ ಕೋಟಿ ಹಣ ಖರ್ಚು ಮಾಡಲಾಗಿದೆ ಆದರೂ ಹಲವು ಕ್ಷೇತ್ರಗಳಲ್ಲಿ ಅಭಿವೃದ್ದಿ ಆಗಿಲ್ಲ. ಈ ಬಗ್ಗೆ ಸಮಿತಿಯಿಂದ ಹಲವು ಆಯಾಮಗಳಲ್ಲಿ ಅಧ್ಯಯನ ನಡೆಸಲಾಗುವುದು ಎಂದರು.  ಅನುದಾನ ಖರ್ಚು ಮಾಡಿದರೆ ಅಭಿವೃದ್ದಿ ಆಗುತ್ತದೆ ಎಂಬುದು ಸಾಧ್ಯವಿಲ್ಲ. ಅಲ್ಲಿನ ಜನರ ತಲಾ ಆದಾಯ ಹೆಚ್ಚಾಗಬೇಕು. ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದ  ತಲಾ ಆದಾಯದಲ್ಲಿ ವ್ಯತ್ಯಾಸ ಇವೆ. ಉತ್ತರ ಕರ್ನಾಟಕ ಕಡಿಮೆ ತಲಾ ಆದಾಯ ಹೊಂದಿವೆ.  ಪ್ರಾದೇಶಿಕ ಅ...